ಕಾರವಾರ, ಸೆ. 01 (DaijiworldNews/AA): ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ಭಾನುವಾರ ಸಂಭವಿಸಿದೆ.

ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಮಿತ್ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದರು.
ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿಕೊಂಡಿದೆ. ತಕ್ಷಣ ಮನೆಯವರು ಅಮಿತ್ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದಿದ್ದಾರೆ. ತಕ್ಷಣ ಅವರನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.