ನವದೆಹಲಿ, ಅ. 03 (DaijiworldNews/AA): ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, "ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ" ಎಂದು ಹೇಳಿದ್ದಾರೆ.
"ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ" ಎಂದು ವಾಗ್ದಾಳಿ ನಡೆಸಿದ್ದಾರೆ.