ಬೆಂಗಳೂರು/ಗುವಾಹಟಿ, ಅ. 27 (DaijiworldNews/AK): ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಿಯಾಂಕ್ ಖರ್ಗೆ ಈಡಿಯಟ್ ಎಂದು ಕರೆದರೆ ಪ್ರಿಯಾಂಕ್ ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸೆಮಿಕಂಡಕ್ಟರ್ ಫ್ಯಾಕ್ಟರಿ ಕಂಪನಿಗಳು ತಮ್ಮ ಘಟಕವನ್ನು ತೆರೆಯಲು ಗುಜರಾತ್ ಮತ್ತು ಅಸ್ಸಾಂ ರಾಜ್ಯಗಳನ್ನು ಆಯ್ಕೆ ಮಾಡಿದ್ದವು. ಈ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಸೆಮಿಕಂಡಕ್ಟರ್ ಉದ್ದಿಮೆಗಳು ಸಹಜವಾಗಿಯೇ ಬೆಂಗಳೂರಿನತ್ತ ಆಕರ್ಷಿತವಾಗಿರುತ್ತದೆ. ಆದರೆ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಸ್ಥಾಪನೆಯಾಗಬೇಕಿದ್ದ ಹೂಡಿಕೆಗಳನ್ನು ಬಿಜೆಪಿ ಆಡಳಿತ ಇರುವ ರಾಜ್ಯಗಳಿಗೆ ತಿರುಗಿಸುತ್ತದೆ ಎಂದು ಹೇಳಿದ್ದರು.
ಅಸ್ಸಾಂ ಉದ್ದೇಶಿಸಿ ಹೇಳಿಕೆ ನೀಡಿದ್ದು ಇದೀಗ ಬಿಜೆಪಿಯನ್ನು ಕೆರಳಿಸಿದೆ. ಇದು ಅಸ್ಸಾಂ ಯುವಜನರಿಗೆ ಮಾಡಿರುವ ಅನ್ಯಾಯ. ಅಸ್ಸಾಂ ಕಾಂಗ್ರೆಸ್ ಈ ಹೇಳಿಕೆಯನ್ನು ಖಂಡಿಸಬೇಕು ಎಂದು ಆಗ್ರಹಿಸಿದೆ.
ಪ್ರಿಯಾಂಕ್ ಖರ್ಗೆ ಒಬ್ಬ ಫಸ್ಟ್ ಕ್ಲಾಸ್ ಈಡಿಯಟ್. ಅವರು ಅಸ್ಸಾಮಿ ಯುವಕರನ್ನು ಅವಮಾನಿಸಿದ್ದಾರೆ. ಪ್ರಿಯಾಂಕ್ ಹೇಳಿಕೆಯನ್ನು ಅಸ್ಸಾಂ ಕಾಂಗ್ರೆಸ್ ಖಂಡಿಸಿಲ್ಲ. ಬಹುಶಃ, ಅಸ್ಸಾಂನಲ್ಲಿ ವಿದ್ಯಾವಂತ ಯುವಕರಿಲ್ಲ ಎಂದು ಅವರು ಹೇಳಿರುವುದರಿಂದ ನಾವು ಅವರ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದು ಹೇಳಿದರು.