ನವದೆಹಲಿ,ನ. 11 (DaijiworldNews/AK):ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸ್ಫೋಟದಲ್ಲಿ ಶಾಶ್ವತವಾಗಿ ಅಂಗವಿಕಲರಾದವರಿಗೆ 5 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ತೆರಳಿ ಗಾಯಾಳುಗಳ ಆರೋಗ್ಯವನ್ನು ಸಿಎಂ ವಿಚಾರಿಸಿದರು.
ದೆಹಲಿಯಲ್ಲಿ ನಡೆದ ಸ್ಫೋಟ ಇಡೀ ನಗರವನ್ನೇಆತಂಕಕ್ಕೆ ದೂಡಿದೆ. ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುತ್ತದೆ ಎಂದು ಗುಪ್ತಾ ಅವರು ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು