ಈರೋಡ್, ಡಿ. 05 (DaijiworldNews/AA): ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ.

ಈರೋಡ್ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ.
ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣ ಆತನ ಪೋಷಕರಾದ ಮಾಣಿಕ್ ಮತ್ತು ಮಹಾಲಕ್ಷ್ಮಿ ನೆರೆಹೊರೆಯವರ ಸಹಾಯದಿಂದ ಆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.
ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು, ಆತನ ಶ್ವಾಸನಾಳದಲ್ಲಿ ಬಾಳೆಹಣ್ಣಿನ ತುಂಡು ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ. ನಂತರ ವೈದ್ಯರು ಆ ಮಗುವನ್ನು ಚಿಕಿತ್ಸೆಗಾಗಿ ಈರೋಡ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಆದರೆ, ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಉಸಿರಾಡಲಾಗದೆ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ನಂತರ ಬಾಳೆಹಣ್ಣಿನ ತುಂಡನ್ನು ಮಗುವಿನ ಶ್ವಾಸನಾಳದಿಂದ ತೆಗೆದುಹಾಕಲಾಯಿತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಾಣಿಕ್ಕಂ-ಮಹಾಲಕ್ಷ್ಮಿ ದಂಪತಿಗೆ 5 ವರ್ಷದ ಸಾಯಿಶರಣ್ ಎಂಬ ಮಗ ಮತ್ತು 2 ವರ್ಷದ ಮಗಳಿದ್ದಾರೆ. ದಂಪತಿಗಳಿಬ್ಬರೂ ಕೂಲಿ ಕೆಲಸಕ್ಕೆ ಹೋಗುವುದರಿಂದ ಅವರು ಸಾಮಾನ್ಯವಾಗಿ ಇಬ್ಬರೂ ಮಕ್ಕಳನ್ನು ಅಜ್ಜಿಯ ಮನೆಯಲ್ಲಿ ಬಿಡುತ್ತಿದ್ದರು. ಡಿ. 2ರ ರಾತ್ರಿ ಆ ಹುಡುಗನ ಅಜ್ಜಿ ಸಾಯಿಶರಣ್ಗೆ ತಿನ್ನಲು ಬಾಳೆಹಣ್ಣು ಕೊಟ್ಟಿದ್ದಾರೆ. ಹಣ್ಣು ತಿಂದ ಹುಡುಗ ಅದನ್ನು ನುಂಗಲು ಕಷ್ಟಪಡುತ್ತಿದ್ದನು. ಆ ಬಾಳೆಹಣ್ಣು ಹುಡುಗನ ಶ್ವಾಸನಾಳದಲ್ಲಿ ಸಿಲುಕಿ ಉಸಿರಾಡಲು ತೊಂದರೆಯುಂಟಾಗಿ ಬಾಲಕ ಮೃತಪಟ್ಟಿದ್ದಾನೆ.