ನವದೆಹಲಿ,ಡಿ. 05 (DaijiworldNews/AK): ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಅವರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಮತ್ತು ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ಕೊಟ್ಟಿದ್ದಾರೆ.
ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚನೆ ನೀಡಿದ್ದಾರೆ.