ಬೆಳಗಾವಿ, ಡಿ. 08 (DaijiworldNews/AA): ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ.

"ಡಿಕೆಶಿ ಸಿಎಂ ಆದರೆ ನಾನು ಸಂಪುಟ ಸೇರುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಅವರು ಸಿಎಂ ಆದಾಗ ಆ ಪ್ರಶ್ನೆ ಏಳುತ್ತದೆ. ನಾನು ಕಾಂಗ್ರೆಸ್ನಲ್ಲೇ ಇದ್ದವನು. ಪಕ್ಷ ನನಗೆ ಏನು ಮಾಡಿಲ್ಲ ಆದರೆ ಕೆಲವರು ಷಡ್ಯಂತ್ರ ಮಾಡಿದ್ದಾರೆ" ಎಂದು ಯಾರ ಹೆಸರನ್ನು ಉಲ್ಲೇಖಿಸದೇ ರಾಜಣ್ಣ ದೂರಿದರು.
"ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ನಾನು ಪಕ್ಷ ಬಿಡುತ್ತೇನೆ ಅಂತ ಯಾರು ಹೇಳಿದ್ದು? ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ಸಿದ್ದರಾಮಯ್ಯನವರು ಹೈಕಮಾಂಡ್ಗೆ ಹೆದರಿಸುವಂತಹದ್ದು, ಹೈಕಮಾಂಡ್ ಸಿದ್ದರಾಮಯ್ಯನವರನ್ನು ಕೈ ಬಿಡುವುದಾಗಲಿ ಇಲ್ಲ" ಎಂದರು.