National
'ಎರಡನೇ ಬಾರಿ ನಾನು ಮುಖ್ಯಮಂತ್ರಿಯಾಗಿದ್ದು, ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ'- ಸಿಎಂ
- Fri, Dec 19 2025 10:08:56 PM
-
ಬೆಳಗಾವಿ, 19 (DaijiworldNews/AK): ಎರಡನೇ ಬಾರಿ ನಾನು ಮುಖ್ಯಮಂತ್ರಿಯಾಗಿದ್ದು, ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ.. ಬಿಜೆಪಿಯವರು 9 ವರ್ಷದಲ್ಲಿ 5 ಜನ ಮುಖ್ಯಮಂತ್ರಿಗಳಾಗಿದ್ದರು. ಬಿಜೆಪಿಯ ಪ್ರಯತ್ನ ಹುಳಿಹಿಂಡುವ ಪ್ರಯತ್ನ ಸಫಲವಾಗುವುದಿ್ಲ. ನಮ್ಮ ಸರ್ಕಾರ ಗಟ್ಟಿಯಾಗಿದ್ದು, ಅಸ್ಥಿರವಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಪರಿಷತ್ತಿನಲ್ಲಿ ನಡೆದ ಚರ್ಚೆಗೆ ಉತ್ತರ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಇದು ಬಿಜೆಪಿಯ ಭ್ರಮೆ.ತನ್ನ ಪೂರ್ಣ ಅವಧಿಯನ್ನು ಮುಗಿಸಿ , ನಂತರ 2028 ರಲ್ಲೂ ಕಾಂಗ್ರೆಸ ಸರ್ಕಾರ ಅಧಿಕಾರಕ್ಕೆ ಬರಲಿದೆ. 2008 , 2018 ಅವಧಿಯಲ್ಲಿ ಬಿಜೆಪಿ ಜನಾರ್ಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ರಾಜ್ಯದ ಜನರು ಬಿಜೆಪಿಗೆ ಒಮ್ಮತ ತೋರಿಸಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದರು.ಇದೇ ವೇಳೆ ಉತ್ತರಿಸಿದ ಅವರು, ಉತ್ತರ ಕರ್ನಾಟಕದ ಬಗ್ಗೆ ಎರಡೂ ಸದನಗಳಲ್ಲಿ ಹೆಚ್ಚು ಸದಸ್ಯರು ಮಾತನಾಡಿದ್ದಾರೆ. ಇಲ್ಲಿ ಬಿಜೆಪಿಯವರು 7 ಜನ ಹಾಗೂ ಕಾಂಗ್ರೆಸ್ ನ 5 ಜನ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರು ಸೇರಿದಂತೆ ಒಟ್ಟು 5 ಗಂಟೆ 48 ನಿಮಿಷ ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಚರ್ಚೆ ಅಧಿವೇಶನದ ಎರಡನೇ ದಿನವೇ ಪ್ರಾರಂಭವಾಗಿದ್ದು ಇದೇ ಮೊದಲನೇ ಬಾರಿ ಎಂದರು.
ಪ್ರಾದೇಶಿಕ ಅಸಮತೋಲನ ನಿವಾರಣೆಯಿಂದ ಸಮಾನತೆ ಸಾಧ್ಯ
ವಿಧಾನ ಪರಿಷತ್ ನ ಹಿರಿಯ ಮನೆ ಎಂದು ಕರೆಯಲಾಗುತ್ತಿದ್ದು, ಇಲ್ಲಿನ ಸದಸ್ಯರ ಮಾತಿಗೆ ತೂಕವಿರುತ್ತದೆ. ಸದಸ್ಯರ ಸಲಹೆಗಳು ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಬಹಳ ಮುಖ್ಯವಾಗುತ್ತದೆ. ಕರ್ನಾಟಕದಲ್ಲಿ 6.95 ಲಕ್ಷ ಜನರಿದ್ದಾರೆ. ಅದರಲ್ಲಿ ಉತ್ತರ ಕರ್ನಾಟಕದಲ್ಲಿ 2.96,28,767 ಜನರಿದ್ದಾರೆ. 42% ಮಾತ್ರ ಉತ್ತರ ಕರ್ನಾಟಕದಲ್ಲಿ ಇದ್ದಾರೆ. 58% ದಕ್ಷಿಣ ಕರ್ನಾಟಕದಲ್ಲಿದ್ದಾರೆ. ಉತ್ತರ ಕರ್ನಾಟಕದಲ್ಲಿ 31 ಜಿಲ್ಲೆಗಳಲ್ಲಿ 14 ಉತ್ತರ ಕರ್ನಾಟಕಕ್ಕೆ ಬರುತ್ತವೆ. 224 ವಿಧಾನ ಸಭಾ ಕ್ಷೇತ್ರಗಳಲ್ಲಿ 97 ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಬರುತ್ತವೆ.
ರಾಜ್ಯದ ಸಮಗ್ರ ಅಭಿವೃದ್ಧಿಗೆ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಅಸಮತೋಲನ ನಿವಾರಣೆಯಾಗಿ ಸಮಾನತೆ ಸಾಧಿಸಬೇಕು. ಪ್ರಾದೇಶಿಕ ಅಸಮಾನತೆ ನಿವಾರಿಸದಿದ್ದರೆ, ಜನರ ಕೂಗು ಇದ್ದೇ ಇರುತ್ತದೆ. ಉತ್ತರ ಕರ್ನಾಟಕದ ಬಗ್ಗೆ ಅಭಿವೃದ್ಧಿಯಾಗದೇ ಇರಲು ಹಲವು ಕಾರಣಗಳಿವೆ ಎಂದರು.
ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನ
ಬೆಂಗಳೂರು ಹಾಲು ಯೂನಿಯನ್ ಲ್ಲಿ ನೋಡಿದರೆ. ಒಂದು ದಿನಕ್ಕೆ 17 ಲಕ್ಷ ಲೀ. ಉತ್ಪಾದನೆಯಗುತ್ತಿದ್ದು, ಕಲ್ಬುರ್ಗಿ ಹಾಲು ಯೂನಿಯನ್ ದಲ್ಲಿ 67 ಸಾವಿರ ಲೀ. ಹಾಲು ಉತ್ಪಾದನೆಯಾಗುತ್ತದೆ. ಇದು ಪ್ರಾದೇಶಿಕ ಅಸಮಾನತೆಗೆ ಸ್ಪಷ್ಟ ಉದಾಹರಣೆಯಾಗಿದೆ. ಇದು ಜಿಲ್ಲಾವಾರು ತಲಾ ಆದಾಯದ ಮೇಲೂ ಪರಿಣಾಮ ಬೀರುತ್ತದೆ. ಕರ್ನಾಟಕ ರಾಜ್ಯದಲ್ಲಿ ಸರಾಸರಿ ತಲಾ ಆದಾಯ 3,39,813 ರೂ. ಇದೆ. ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿ ನಂ.1 ರಾಜ್ಯವಾಗಿದೆ. ಹೈನುಗಾರಿಕೆ ಚಟುವಟಿಕೆಗಳು , ಕೈಗಾರಿಕೆಗಳು ಜಾಸ್ತಿಯಾದರೆ, ಜನರ ವಲಸೆ ಕಡಿಮೆ , ಆರ್ಥಿಕ ತೆ ಸುಧಾರಿಸಿ, ತಲಾ ಆದಾಯವೂ ಜಾಸ್ತಿಯಾಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ತಲಾವಾರು ಆದಾಯ ಹೆಚ್ಚಾಗಿದೆ. ಆದ್ದರಿಂದ ಕರ್ನಾಟಕ ತಲಾವಾರು ಆದಾಯದಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದರು.
371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರಹೈದರಾಬಾದ್ ಕರ್ನಾಟಕವನ್ನು 371 ಜೆ ಗೆ ಸೇರಿಸಬೇಕೆಂದುಬಹಳ ಹಿಂದಿನಿಂದಲೂ ಕೂಗಿತ್ತು. 1991ರಲ್ಲಿ ಹೆಚ್. ಕೆ.ಡಿ. ಬಿ ಪ್ರಾರಂಭವಾಯಿತು. ನಂತರ 2011_ 13 ರಲ್ಲಿ , 6/11/2013 ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು 371 ಜೆ ಸೇರ್ಪಡೆಯಾಯಿತು. 371 ಜೆ ವಿಶೇಷ ಸ್ಥಾನಮಾನ ಕೊಟ್ಟಿದ್ದು ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ಬಿಜೆಪಿಯ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರುಅದನ್ನು ತಿರಸ್ಕರಿಸಿದರು. ಹೆಚ್ ಕೆ .ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಶೇ. 85% ರಷ್ಟು ಹೈದರಾಬಾದ್ ಕರ್ನಾಟಕದಲ್ಲಿ ಮೀಸಲಾತಿ ನೀಡಬೇಕೆಂದು ಹಾಗೂ ರಾಜ್ಯದ ಇತರ ಭಾಗಗಳಲ್ಲಿನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 8% ಮಾಡಬೇಕೆಂದು ಮಾಡಿದ್ದ ಶಿಫಾರಸ್ಸನ್ನು ಯಥಾವತ್ತು ಜಾರಿಗೆ ತರಲಾಯಿತು ಎಂದರು.
ಬಿಜೆಪಿಯವರು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧಿಗಳು
2013-14 ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದೆ. 2023 ರಲ್ಲಿ 3000 ಕೋಟಿ, 2024/25 ರಲ್ಲಿ 3000 ಕೋಟಿ, 2025/2026 ರಲ್ಲಿ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು ಅನುದಾನ ನೀಡಿರುವುದು 24778 ಕೋಟಿಯಾದರೆ, ಬಿಡುಗಡೆಯಾಗಿರುವುದು 16229 ರೂಪಾಯಿ, ಇಲ್ಲಿಯವರೆಗೆ ವೆಚ್ಚವಾಗಿರುವುದು14890 ರೂಪಾಯಿಗಳು ಎಂದರು. 2013 -14 ರಿಂದ ಇಲ್ಲಿಯವರೆಗೆ ಬಿಜೆಪಿಯ ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಬಿಜೆಪಿಯವರು ಉತ್ತರ ಕರ್ನಾಟಕ ಅಭಿವೃದ್ಧಿಯ ವಿರೋಧಿಗಳು.
ರಾಜ್ಯಕ್ಕೆ ಬರಬೇಕಾಗಿದ್ದ 11495 ಕೋಟಿ ರೂ. ಕೇಂದ್ರ ಕೊಟ್ಟಿಲ್ಲ
15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ವಿಶೇಷ ಅನುದಾನ ಸೇರಿದಂತೆ ಒಟ್ಟು 11495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿದ್ದರೂ, ನಂತರ ಕೊಡಲಿಲ್ಲ. ಕಳೆದ ಮೂರು ವರ್ಷದಿಂದ ಈ ಮೊತ್ತವನ್ನು ಕೇಂದ್ರ ಮಂಜೂರು ಮಾಡಲೇ ಇಲ್ಲ. ವಿವಿಧ ಯೋಜನೆಗಳಡಿಯಲ್ಲಿ 125000 ಕೋಟಿ ರೂ.ಗಳು ಕೇಂದ್ರದಿಂದ ರಾಜ್ಯಕ್ಕೆ ಖೋತಾ ಆಗಿದೆ. ರಾಜ್ಯದಿಂದ ತೆರಿಗೆ 4.50 ಲಕ್ಷ ಕೋಟಿ ಸಂಗ್ರಹಣೆಯಾದರೂ , ನಮಗೆ ನ್ಯಾಯಯುತ ಪಾಲು ದೊರೆಯುತ್ತಿಲ್ಲ. ಕೆಕೆಆರ್ ಡಿಬಿ ಗೆ ಅನುದಾನ ಕೊಡದೇ , ಮಹಾರಾಷ್ಟ್ರದ ವಿಧರ್ಭ ಕ್ಕೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ 173 ಟಿಎಂಸಿ ನೀರು ಬಳಸಿಕೊಳ್ಳಲು ಕೇಂದ್ರದಿಂದ ಇದುವರೆಗೆ ಅಧಿಸೂಚನೆ ಬಿಡುಗಡೆ ಮಾಡಿಲ್ಲ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ಅನುಮತಿ ನೀಡಿಲ್ಲ. ಈ ಬಗ್ಗೆ ಅನೇಕ ಬಾರಿ ಕೇಂದ್ರವನ್ನು ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.