ಕಾರವಾರ, ಡಿ. 28 (DaijiworldNews/AA): ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆ ಡಾಕ್ ನಿಂದ ಐ.ಎನ್.ಎಸ್ ವಾಗ್ಶಿರ್ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ದಾಖಲೆ ಬರೆದಿದ್ದಾರೆ.

ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ನಂತರ ಸಬ್ ಮೇರಿನ್ ನಲ್ಲಿ ಪ್ರಯಾಣಿಸಿದ ಎರಡನೇ ರಾಷ್ಟಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಅವರು ಪಾತ್ರರಾಗಿದ್ದಾರೆ.
ಐಎನ್ಎಸ್ ವಾಘಶೀರ್ ಭಾರತೀಯ ನೌಕಾಪಡೆಗೆ ಸೇರಿದ ಆರನೇಯ ಕಲ್ವರಿ-ವರ್ಗದ ಜಲಾಂತರ್ಗಾಮಿ ನೌಕೆಯಾಗಿದೆ. ಇದು ದೇಶದ ಅತ್ಯಂತ ಸುಧಾರಿತ ಜಲಾಂತರ್ಗಾಮಿಯಾಗಿದ್ದು, 'ಮೇಕ್ ಇನ್ ಇಂಡಿಯಾ'ದ ರಕ್ಷಣಾ ಉಪಕ್ರಮ ಎಂದು ಹೆಸರುವಾಸಿಯಾಗಿದೆ.