ಬೆಂಗಳೂರು, ಜ. 06 (DaijiworldNews/AK): 5 ವರ್ಷವೂ ಸಿದ್ದರಾಮಯ್ಯನವರೇ ಸಿಎಂ . 2.5 ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಿದ್ದರಾಮಯ್ಯ ಪರ ಮಾತನಾಡಿದ್ದಾರೆ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಮಾಧ್ಯಮ ಸೃಷ್ಟಿ. ಯಾರಿಗೆ ಸಿಎಂ ಆಗಲು ಇಷ್ಟ ಇರುವುದಿಲ್ಲ ಹೇಳಿ. ನಾನು ಸಿಎಂ ಯಾಕೆ ಆಗಬಾರದು? ನಾನು ಸೀನಿಯರ್ ಇದ್ದೇನೆ. ಸಿಎಂ ಬದಲಾವಣೆ ಆಗಬೇಕಾದರೆ ಶಾಸಕರ ಅಭಿಪ್ರಾಯ ಪಡೆಯಬೇಕು. ಇದೆಲ್ಲವೂ ಆಗದೇ ಹೇಗೆ ಬದಲಾವಣೆ ಆಗುತ್ತದೆ ಎಂದು ಪ್ರಶ್ನಿಸಿದರು.
ಹೈಕಮಾಂಡ್ ನಿರ್ಧಾರ ಅಂತಿಮ ಎಂಬುದಾಗಿ ಡಿಕೆಶಿ ಹೇಳಿದ್ದಾರೆ. ಇಕ್ಬಾಲ್ ಹುಸೇನ್ ಮನೋರಂಜನೆಗೋಸ್ಕರ ಡಿಕೆಶಿ ಸಿಎಂ ಅಂತ ಹೇಳುತ್ತಾರೆ ಎಂದರು. ಡಿಕೆ ಶಿವಕುಮಾರ್ ಅವರಿಗೆ ಮುಂದೆ ಸಿಎಂ ಆಗುವ ಅವಕಾಶ ಸಿಗಬಹುದು. ಡಿಕೆಶಿ ಆಕಾಂಕ್ಷಿ ಆಗುವುದರಲ್ಲಿ ತಪ್ಪಿಲ್ಲ. ಸಮಯ ಸಂದರ್ಭ ಮುಖ್ಯ ಆಗುತ್ತದೆ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಅಂತ ರಾಯರೆಡ್ಡಿ ಪುನರುಚ್ಚಾರ ಮಾಡಿದರು.