ನವದೆಹಲಿ, ಫೆ. 01 (DaijiworldNews/AA): ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಫಾಸ್ಟ್ಟ್ಯಾಗ್ ಗೆ ಸಂಬಂಧಿಸಿದ ಕೆವೈಸಿ ಪರಿಶೀಲನಾ ಪ್ರಕ್ರಿಯೆಯನ್ನ ಸಂಪೂರ್ಣವಾಗಿ ತೆಗೆದುಹಾಕಿರುವುದಾಗಿ ಘೋಷಿಸಿದೆ.

ಫೆಬ್ರವರಿ 1 ರಿಂದ, ಫಾಸ್ಟ್ಟ್ಯಾಗ್ ಅನ್ನು ಒಮ್ಮೆ ಸಕ್ರಿಯಗೊಳಿಸಿದ ನಂತರ ಅಂದರೆ ಆಕ್ಟಿವೇಟ್ ಮಾಡಿದ ಬಳಿಕ, ಯಾವುದೇ ಹೆಚ್ಚುವರಿ ಕೆವೈಸಿ ಪರಿಶೀಲನೆಯ ಅಗತ್ಯವಿರುವುದಿಲ್ಲ. ವಾಹನದ ಮಾಹಿತಿಯನ್ನು ಪರಿಶೀಲಿಸುವ ಸಂಪೂರ್ಣ ಜವಾಬ್ದಾರಿಯನ್ನ ಫಾಸ್ಟ್ಟ್ಯಾಗ್ ವಿತರಿಸುವ ಬ್ಯಾಂಕ್ಗಳೇ ತೆಗೆದುಕೊಳ್ಳಲಿವೆ. ಇದರಿಂದ ಗ್ರಾಹಕರಿಗೆ ಪದೇ ಪದೇ ಕೆವೈಸಿ ಅಪ್ಡೇಟ್ ಮಾಡುವ ಅಗತ್ಯವಿಲ್ಲ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಇಂದು ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಇನ್ನು ಬಜೆಟ್ ಮಂಡನೆಗೂ ಮುನ್ನ ಫಾಸ್ಟ್ಟ್ಯಾಗ್ ನಿಯಮಗಳು, ತಂಬಾಕು ಉತ್ಪನ್ನಗಳ ಬೆಲೆಯಲ್ಲಿ ಬದಲಾವಣೆ, ಎಲ್ಪಿಜಿ ಗ್ಯಾಸ್ ದರದಲ್ಲಿ ಬದಲಾವಣೆಯಾಗಿದೆ.