ಬೆಂಗಳೂರು, ಆ. 13 (DaijiworldNews/HR): ಮಂಗಳವಾರ ರಾತ್ರಿ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ಕಿಟಕಿ ಗಾಜುಗಳನ್ನು ಒಡೆದು ವಾಹನಗಳಿಗೆ ಬೆಂಕಿ ಹಚ್ಚಿ ಗಲಭೆ ಸೃಷ್ಟಿಸಿದ್ದ ಎಸ್ಡಿಪಿಐ ಮುಖಂಡರು ಸೇರಿದಂತೆ 300 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮುಜಾಮ್ಮಿಲ್ ಪಾಷ, ಶಿವಾಜಿನಗರದ ಅಫ್ನಾನ್, ಸೈಯದ್ ಮಸೂದ್, ಅಯಾಜ್, ಅಲ್ಲಾಭಕ್ಷ ಗಲಭೆಯ ಪ್ರಮುಖ ಆರೋಪಿಗಳಾಗಿದ್ದಾರೆ. 300ಕ್ಕೂ ಅಧಿಕ ಮಂದಿಯ ಗುಂಪು ಕಟ್ಟಿಕೊಂಡು ಠಾಣೆಗೆ ನುಗ್ಗಿದ್ದ ಇವರು, ಪೊಲೀಸರ ಆಯುಧಗಳನ್ನು ಕಸಿದುಕೊಳ್ಳಲು ಯತ್ನಿಸಿದ್ದರು. ಠಾಣೆಯ ಗಾಜು ಒಡೆದು, ಕಾರು ಹಾಗೂ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟು ನಂತರವೇ ಗಲಭೆ ಸೃಷ್ಟಿಸಿದರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಠಾಣೆಯಲ್ಲಿದ್ದ ಇನ್ಸ್ಪೆಕ್ಟರ್ ಕೇಶವಮೂರ್ತಿ, ಠಾಣೆ ಸಿಬ್ಬಂದಿ ಶ್ರೀಧರ್ ಹಾಗೂ ಹಲವರ ಮೇಲೆ ಗಲಭೆಕೊರರು ಹಲ್ಲೆ ನಡೆಸಿದ್ದಾರೆ. ಹೀಗಾಗಿ ಘಟನೆ ಬಗ್ಗೆ ಇನ್ಸ್ಪೆಕ್ಟರ್ ಕೇಶವಮೂರ್ತಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.