ಬೆಂಗಳೂರು, ಫೆ.19 (DaijiworldNews/HR): ಫೆ. 22ರಿಂದ ಕರ್ನಾಟಕದಲ್ಲಿ 6ರಿಂದ 8ನೇ ತರಗತಿಗಳು ಆರಂಭವಾಗಲಿದ್ದು, ಬೆಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಸಹಿತ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳ ಶಾಲೆಗಳಲ್ಲಿ ಅಂದಿನಿಂದ 8ನೇ ತರಗತಿಗೆ ಮಾತ್ರ ಶಾಲೆ, ಅದಕ್ಕಿಂತ ಕಿರಿಯರಿಗೆ ಎಂದಿನಂತೆ ವಿದ್ಯಾಗಮ ಮುಂದುವರಿಯಲಿದೆ ಎಂದು ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಸಾಂಧರ್ಭಿಕ ಚಿತ್ರ
ಈ ಹಿಂದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿಯಲ್ಲಿ ಫೆ. 22ರಿಂದ ಕರ್ನಾಟಕದಲ್ಲಿ 6ರಿಂದ 8ನೇ ತರಗತಿಗಳು ಆರಂಭವಾಗಲಿದೆ ಎಂಬ ನಿರ್ಧಾರ ಕೈಗೊಳ್ಳಲಾಗಿತ್ತು.
ಇನ್ನು ಕೇರಳದಿಂದ ಗಡಿಯ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಶಾಲೆಗೆ ಹಾಜರಾಗಬೇಕು. 6ರಿಂದ 8ನೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕ ಅಥವಾ ಪೋಷಕರಿಂದ ಒಪ್ಪಿಗೆ ಪತ್ರ ತರುವುದು ಕಡ್ಡಾಯ. ತರಗತಿಗೆ ಹಾಜರಾಗಬೇಕು ಎಂಬ ಕಡ್ಡಾಯ ನಿಯಮವಿಲ್ಲ" ಎಂದು ಸೂಚಿಸಲಾಗಿದೆ.
ಪೂರ್ಣ ಪ್ರಮಾಣದಲ್ಲಿ ಆರರಿಂದ ಎಂಟನೇ ತರಗತಿಯರೆಗೆ ತರಗತಿಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಮನೆಯಿಂದಲೇ ತರುವಂತೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.