ಶಿವಮೊಗ್ಗ, ಏ 15 (DaijiworldNews/DB): ಈಶ್ವರಪ್ಪ ಶೀಘ್ರ ಕಳಂಕಮುಕ್ತರಾಗಿ ಮತ್ತೆ ಸಚಿವ ಪಟ್ಟ ಅಲಂಕರಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
![](https://daijiworld.ap-south-1.linodeobjects.com/Linode/img_tv247/BSY.jpg)
ಶಿವಮೊಗ್ಗ ಬಿಜೆಪಿ ಕಾರ್ಯಾಲಯದ ಹಿಂಭಾಗದಲ್ಲಿ ಬಿಜೆಪಿ ನಗರ ಮತ್ತು ಶಿವಮೊಗ್ಗ ಗ್ರಾಮಾಂತರದ ನವೀಕೃತ ಕಾರ್ಯಾಲಯವನ್ನು ಉದ್ಘಾಟಿಸಿದ ಬಳಿಕ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರು ಭ್ರಷ್ಟಾಚಾರ ಆರೋಪದಿಂದ ಮುಕ್ತರಾಗಿ ಶೀಘ್ರ ಹೊರ ಬರುತ್ತಾರೆ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಮುಂದಿನ ಮೂರು ತಿಂಗಳೊಳಗೆ ತನಿಖೆ ಮುಕ್ತಾಯಗೊಂಡರೆ ಈಶ್ವರಪ್ಪ ಮತ್ತೆ ಸಚಿವರಾಗಲಿದ್ದಾರೆ. ಅವರು ಕಳಂಕಮುಕ್ತರಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.