ಬೆಂಗಳೂರು, ಮೇ 21 (DaijiworldNews/AA): ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಪತ್ನಿ ಭವಾನಿ ಕಾರು ಚಾಲಕ ಅಜಿತ್ ಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ ಮಾಡಲಾಗಿದೆ.
![](https://daijiworld.ap-south-1.linodeobjects.com/Linode/img_tv247/AA-220524-bavani.jpg)
ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರಿನಲ್ಲಿ ಕರೆದೊಯ್ದಿದ್ದ ಆರೋಪ ಕೇಳಿಬಂದಿದ್ದು ಹೀಗಾಗಿ ಸಂತ್ರಸ್ತೆಯ ಅಪಹರಣ ಪ್ರಕರಣ ಸಂಬಂಧ ಎಸ್ಐಟಿ ಈಗಾಗಲೇ 2 ಬಾರಿ ಸಮನ್ಸ್ ನೀಡಿದೆ. ಆದರೆ ಅಜಿತ್ ಅಪಹರಣ ಪ್ರಕರಣ ದಾಖಲಾದ ಬಳಿಕ ಪರಾರಿಯಾಗಿದ್ದಾನೆ.
ಪತಿ ರೇವಣ್ಣ ಹಾಗೂ ಪುತ್ರ ಪ್ರಜ್ವಲ್ ವಿರುದ್ಧ ದಾಖಲಾದ ಪ್ರಕರಣದಿಂದಾಗಿ ಭವಾನಿಗೂ ಸಂಕಷ್ಟ ಎದುರಾಗಿದೆ. ಲೈಂಗಿಕ ಕಿರುಕುಳ ಹಾಗೂ ಅಪಹರಣ ಈ ಎರಡೂ ಪ್ರಕರಣದಲ್ಲೂ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿದೆ. ಭವಾನಿ ಕರೆದರು ಎಂದು ಮಹಿಳೆಯನ್ನು ಅಪಹರಣ ಮಾಡಿರುವುದಾಗಿ ಆರೋಪಿಸಲಾಗಿದೆ. ಇನ್ನು ಭವಾನಿ ವಿರುದ್ಧ ಪ್ರಕರಣ ಸಂಬಂಧ ಸಾಕ್ಷಿಗಳೇನಾದರೂ ದೊರೆತರೆ ಅವರಿಗೂ ಸಂಕಷ್ಟ ಎದುರಾಗಲಿದೆ.