ದೆಹಲಿ, ಮೇ.22 (DaijiworldNews/AA): ಎಎಪಿ ಸಂಸದೆ ಸ್ವಾತಿ ಮಲಿವಾಲ್ ಪ್ರಕರಣವು ನ್ಯಾಯಯುತವಾಗಿ ತನಿಖೆಯಾಗಬೇಕು ಎಂದು ಹೇಳುವ ಮೂಲಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮೊದಲ ಬಾರಿಗೆ ಕೇಸ್ ಸಂಬಂಧ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ.
![](https://daijiworld.ap-south-1.linodeobjects.com/Linode/img_tv247/AA-220524-kejrival.jpg)
ಹಲ್ಲೆ ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯ ಒದಗಿಸಬೇಕು. ಇನ್ನು ಈ ಘಟನೆ ನಡೆದಾಗ ನಾವು ಸ್ಥಳದಲ್ಲಿ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಚಿವೆ ಅತಿಶಿ, ಸೌರಭ್ ಭಾರದ್ವಾಜ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಈ ವಿಷಯದ ಬಗ್ಗೆ ಪಕ್ಷದ ನಿಲುವನ್ನು ಇಲ್ಲಿಯವರೆಗೆ ಮುಂದಿಟ್ಟಿದ್ದರೂ ಕೇಜ್ರಿವಾಲ್ ಬಗ್ಗೆ ಮಾತನಾಡಿರಲಿಲ್ಲ. ಬುಧವಾರ, ಈ ವಿಷಯ ಕಾನೂನಿನ ಮುಂದೆ ಇದೆ. ನನ್ನ ಹೇಳಿಕೆಯು ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದು. ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.