ಬೆಂಗಳೂರು,ಏ.10(DaijiworldNews/AK): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದರು.

ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಬೈರತಿ ಸುರೇಶ್ ಜೊತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL 2025) ಪಂದ್ಯವನ್ನು ಸಿಎಂ ವೀಕ್ಷಸಿ ಎಂಜಾಯ್ ಮಾಡಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಿಗೆ 7 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿದೆ. ಫಿಲ್ ಸಾಲ್ಟ್ 37, ವಿರಾಟ್ ಕೊಹ್ಲಿ 22, ರಜತ್ ಪಾಟಿದಾರ್ 25, ಟಿಮ್ ಡೇವಿಡ್ 37, ಕೃಣಾಲ್ ಪಾಂಡೆ 18 ರನ್ ಗಳಿಸಿದ್ದಾರೆಡೆಲ್ಲಿ ಪರ ವಿಪ್ರಜ್ ನಿಗಮ್, ಕುಲ್ದೀಪ್ ಯಾದವ್ ತಲಾ 2 ಹಾಗೂ ಮುಕೇಶ್ ಕುಮಾರ್, ಮೋಹಿತ್ ಶರ್ಮಾ ತಲಾ 1 ವಿಕೆಟ್ ಪಡೆದರು.