ಮುಂಬೈ, ನ. 04 (DaijiworldNews/AK): ಖತಾರ್ನಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟಿ20 ಟೂರ್ನಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ನಮನ್ ಧೀರ್ ಕಾಣಿಸಿಕೊಳ್ಳಲಿದ್ದಾರೆ.

ತಂಡದಲ್ಲಿ ಯುವ ಸ್ಫೋಟಕ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಕೂಡ ಸ್ಥಾನ ಪಡೆದಿದ್ದಾರೆ. ಕಳೆದ ಸೀಸನ್ ಐಪಿಎಲ್ನಲ್ಲಿ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಅತ್ತ ಪ್ರಿಯಾಂಶ್ ಆರ್ಯ ಪಂಜಾಬ್ ಕಿಂಗ್ಸ್ ಪರ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಈ ಇಬ್ಬರು ಯುವ ದಾಂಡಿಗರು ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನೆಹಾಲ್ ವಧೇರಾ, ಸೂರ್ಯಾಂಶ್ ಶೆಡ್ಗೆ, ರಮಣ್ದೀಪ್, ಅಶುತೋಷ್ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಯುವ ಆಲ್ರೌಂಡರ್ ಹರ್ಷ್ ದುಬೆ ಕೂಡ ಕಾಣಿಸಿಕೊಂಡಿದ್ದಾರೆ.
ಇನ್ನು ಬೌಲರ್ಗಳ ಪಟ್ಟಿಯಲ್ಲಿ ಕನ್ನಡಿಗ ವಿಜಯಕುಮಾರ್ ವೈಶಾಕ್, ಯಶ್ ಠಾಕೂರ್, ಸುಯಶ್ ಶರ್ಮಾ ಸ್ಥಾನ ಪಡೆದಿದ್ದಾರೆ. ಅದರಂತೆ ಉದಯೋನ್ಮುಖ ಏಷ್ಯಾಕಪ್ ಟಿ20 ಟೂರ್ನಿಗೆ ಭಾರತ ಎ ತಂಡ ಈ ಕೆಳಗಿನಂತಿದೆ…
ಭಾರತ ಎ ತಂಡ : ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ನೆಹಾಲ್ ವಧೇರಾ, ನಮನ್ ಧೀರ್ (ಉಪನಾಯಕ), ಸೂರ್ಯಾಂಶ್ ಶೆಡ್ಗೆ, ಜಿತೇಶ್ ಶರ್ಮಾ (ನಾಯಕ) ರಮಣದೀಪ್ ಸಿಂಗ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಹರ್ಷ್ ದುಬೆ, ಅಶುತೋಷ್ ಶರ್ಮಾ, ಯಶ್ ಠಾಕೂರ್, ಗುರ್ಜಪ್ನೀತ್ ಸಿಂಗ್, ಸುಯಶ್ ಶರ್ಮಾ, ವಿಜಯಕುಮಾರ್ ವೈಶಾಕ್, ಯಧುವೀರ್ ಸಿಂಗ್ ಚರಕ್,