ಕೊಣಾಜೆ ಸೆ20: ಶಟರ್ ಮುರಿದು ಅಡಿಕೆ ಅಂಗಡಿಯ ಒಳನುಗ್ಗಿದ್ದ ಕಳ್ಳರು, ಲಕ್ಷಾಂತರ ಮೌಲ್ಯದ ಅಡಿಕೆ ಕಳವುಗೈದ ಘಟನೆ ಕೊಣಾಜೆ ಮಂಜನಾಡಿಯ ಗ್ರಾಮದ ಕಲ್ಕಟ್ಟ ಎಂಬಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು ಕಳ್ಳರು ಸುಮಾರು 5 ಕ್ವಿಂಟಾಲ್ ಗೂ ಹೆಚ್ಚು ಅಡಿಕೆ ದೋಚಿ ಪರಾರಿಯಾಗಿದ್ದಾರೆ. ಅಂಗಡಿ ಮಾಲೀಕ ಬಶೀರ್ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
![](https://daijiworld.ap-south-1.linodeobjects.com/iWeb/tvdaijiworld/img_tv247/200917_adikekalla3.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/200917_adikekalla2.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/200917_adikekalla1.jpg)