ಕಾರ್ಕಳ, ಡಿ.15 (DaijiworldNews/HR): ನಲ್ಲೂರು ನೆಂಗಿನೇಲು ಎಂಬಲ್ಲಿ ಜಾಗಕ್ಕೆ ಸಂಬಂಧಿಸಿದಂತೆ ಮನೆ ಮಂದಿಗೆ ತಂಡವೊಂದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ.
ಡಿಸೆಂಬರ್ 14ರಂದು ಆರೋಪಿಗಳಾದ ಭಾಸ್ಕರ್ ಶೆಟ್ಟಿ, ಉದಯಶೆಟ್ಟಿ, ಪುಷ್ಪರಾಜ್,ಸುನೀತ್ ರಾಜ್ ಎಂಬವರು ತಮ್ಮ ಜಾಗಕ್ಕೆ ಅತಿಕ್ರಮಿಸಿ ಜೆಸಿಬಿಯಿಂದ ರಸ್ತೆ ನಿರ್ಮಾಣ ಮಾಡುತ್ತಿದ್ದರು. ಅದನ್ನು ಪ್ರಶ್ನಿಸಿದಕ್ಕೆ ಆರೋಪಿತರು ದೂಡಿ ಹಾಕಿ ಬೆದರಿಕೆಯೊಡ್ಡಿದ್ದಾರೆ ಎಂದು ಜಯಶ್ರೀ ಶೆಟ್ಟಿ ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಅದೇ ಸಂದರ್ಭದಲ್ಲಿ ಜಯಶ್ರೀ ಅವರ ತಾಯಿ ಲೀಲಾವತಿ ಶೆಟ್ಟಿ ಅವರು ಘಟನಾ ಸ್ಥಳಕ್ಕೆ ಬಂದಿದ್ದು, ಅವರನ್ನು ನೆಲಕ್ಕೆ ದೂಡಿಹಾಕಿ ಗಾಯಗೊಳಿಸಿದ್ದಾರೆ ಎಂದು ಜಯಶ್ರೀ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.