ಬಂಟ್ವಾಳ, ಮೇ 1 (DaijiworldNews/MS): ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಟ ನಡೆಸಿದ ಹಿನ್ನೆಲೆಯಲ್ಲಿ ಸುಮಾರು 20 ವಾಹನಗಳನ್ನು ಬಂಟ್ವಾಳ ನಗರ ಠಾಣಾ ಎಸ್ಐ. ಅವಿನಾಶ್ ಹಾಗೂ ಗ್ರಾಮಾಂತರ ಎಸ್.ಐ. ಪ್ರಸನ್ನ ಅವರ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಂಡು ದಂಡ ವಿಧಿಸಿ ಬಿಡುಗಡೆ ಮಾಡಲಾಯಿತು.
ಬಿ.ಸಿರೋಡು ಹಾಗೂ ಇತರ ಕಡೆಗಳಲ್ಲಿ ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಎರಡು ಕಾರು ಹಾಗೂ 18 ದ್ವಿ ಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ದಂಡ ಹಾಕಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚು ತ್ತಿದ್ದು ನಿಯಂತ್ರಣಕ್ಕಾಗಿ ಸರಕಾರ ಲಾಕ್ ಡೌನ್ ನಿಯಮ ಜಾರಿ ಮಾಡಿದ್ದಾರೆ.ಆದರೆ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ಬಗ್ಗೆ ಪೋಲೀಸರು ಗರಂ ಆಗಿದ್ದಲ್ಲದೆ ಅಂತವರ ವಾಹನಗಳ ಮೇಲೆ ದಂಡ ವಿಧಿಸಿದ್ದಾರೆ.