ಶಿರ್ವ, ಮೇ 02 (DaijiworldNews/MB) : ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಮೂಡುಬೆಳ್ಳೆ ಗ್ರಾಮದ ಪಾಂಬೂರು ಕಬೆಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಶಂಕರಪುರ ಸುಭಾಸ್ನಗರದ ಕ್ವಾಲ್ವಿನ್ ಕಸ್ತಲಿನೋ(21), ಜಾಬಿರ್(18), ರಿಝ್ವಾನ್(28) ಎಂದು ಗುರುತಿಸಲಾಗಿದೆ.
ಯುವಕರು ಹೊಳೆಯಲ್ಲಿ ಈಜುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಬಳಿಕ ಮುಳುಗು ತಜ್ಞರು ಯುವಕರ ಮೃತ ದೇಹ ಮೇಲಕ್ಕೆ ಎತ್ತಿದ್ದಾರೆ ಎಂದು ವರದಿಯಾಗಿದೆ.
ಇನ್ನು ಸ್ಥಳಕ್ಕೆ ಶಿರ್ವ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.