ಕಾಪು, ಮೇ 02 (DaijiworldNews/SM): ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸುಧಾಕರ್ ತನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ತನ್ನ ಬೀಟ್ ನ ಬಡ ಕುಟುಂಬಕ್ಕೆ ದಿನಸಿ ಸಾಮಗ್ರಿ ಹಾಗೂ ಬಟ್ಟೆಬರೆಗಳನ್ನು ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸುವ ಮುಖಾಂತರ ವಿಶೇಷವಾಗಿ ಹುಟ್ಟೂಹಬ್ಬ ಆಚರಿಸಿಕೊಂಡರು.
ಸದ್ಯ ವಿಶೇಷ ಹುಟ್ಟುಹಬ್ಬದ ಆಚರಣೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. 1997 ರಲ್ಲಿ ಪೊಲೀಸ್ ಇಲಾಖೆಗೆ ಸೇರಿ ಬ್ರಹ್ಮಾವರ ವೃತ್ತ ಕಚೇರಿ, ಮಣಿಪಾಲ ಠಾಣೆ , ಉಡುಪಿ ಪೊಲೀಸ್ ಉಪಾಧೀಕ್ಷಕರ ಕಛೇರಿ, ಉಡುಪಿ ನಗರ ಠಾಣೆಯಲ್ಲಿ ಕಾನ್ಸಟೇಬಲ್ ಆಗಿ ಕರ್ತವ್ಯ ನಿರ್ವಹಿಸಿ ಕಳೆದ 5 ವರ್ಷಗಳಿಂದ ಕಾಪು ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸೇವೆ ಸಲ್ಲಿಸುತ್ತಿದ್ದಾರೆ.
ವಾರಂಟು ಕರ್ತವ್ಯ ನಿರ್ವಹಿಸುವ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ 10 ರಿಂದ 12 ಜನ ಆರೋಪಿ ಗಳನ್ನು ದಸ್ತಗಿರಿ ಮಾಡಿ ಜೈಲಿಗೆ ಅಟ್ಟಿದ ಇವರು ವಾರದ ಹಿಂದೆ ಕೊಲೆ ಪ್ರಕರಣದ ಅರೋಪಿಯನ್ನು 14 ವರ್ಷದ ಬಳಿ ದಸ್ತಗಿರಿ ನಡೆಸಿ ಪ್ರಸಂಶನೆಗೆ ಒಳಗಾಗಿದ್ದಾರೆ.
ಈ ಹಿಂದೆ ಕೋಟೆ ಗ್ರಾಮದ ಬೀಟ್ ಪೊಲೀಸ್ ಆಗಿದ್ದ ಇವರು 3 ಕೊರಗ ಕುಟುಂಬಗಳಿಗೆ ಉಚಿತ ಗ್ಯಾಸ್ ವಿತರಿಸಿ ಎಸ್ಪಿ ನಿಶಾ ಜೆಮ್ಸ್ ಅವರಿಂದ ಪ್ರಶಂಸನಾ ಪತ್ರ ಪಡೆದುಕೊಂಡಿದ್ದರು.