ಬೆಂಗಳೂರು, ಸೆ 23(SM):ದುನಿಯಾ ವಿಜಯ್ ತನ್ನ ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಬಂಧನವಾಗಿರುವ ನಟ ದುನಿಯಾ ವಿಜಯ್
ಅವರು ಮತ್ತಷ್ಟು ದಿನ ಜೈಲಲ್ಲೇ ಉಳಿಯಬೇಕಾಗಿದೆ. ಇಂದು ರಾತ್ರಿ ವೇಳೆ ಕೋರಮಂಗಲದ ನ್ಯಾಯಾಧೀಶರ ಮುಂದೆ ನಟ ದುನಿಯಾ ವಿಜಯ್ ಮತ್ತು ಸ್ನೇಹಿತರನ್ನ ಹಾಜರು ಪಡಿಸಲಾಗಿತ್ತು.
![](https://daijiworld.ap-south-1.linodeobjects.com/iWeb/tvdaijiworld/img_tv247/vijayduniya23918.jpg)
ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶ ನೀಡಿದ್ದಾರೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ದುನಿಯಾ ವಿಜಯ್ ಮತ್ತು ಗ್ಯಾಂಗ್ ನ್ನು ಪೊಲೀಸರು ಕರೆದೊಯ್ದಿದ್ದಾರೆ.
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗ ಮಾರುತಿ ಗೌಡ ಅವರ ಮೇಲೆ ಸೆಪ್ಟೆಂಬರ್ ೨೨ರ ಶನಿವಾರ ರಾತ್ರಿ, ಅಂಬೇಡ್ಕರ್ ಭವನದಲ್ಲಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ನಟ ದುನಿಯಾ ವಿಜಿ, ಟ್ರೈನರ್ ಪ್ರಸಾದ್, ಡ್ರೈವರ್ ಪ್ರಸಾದ್ ಮತ್ತು ಮಣಿ ಎಂಬುವವರನ್ನ ಹೈಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.