ಮಂಗಳೂರು, ಮೇ 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವಂತೆಯೇ ಸದ್ಯ ಆಕ್ಸಿಜನ್ ಕೊರತೆ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿದ್ದು ಮುಂದಿನ 24 ಗಂಟೆಗಳಿಗೆ ಬೇಕಾಗುವ ಆಕ್ಸಿಜನ್ ನಮ್ಮಲ್ಲಿದೆ ಎಂದಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಪ್ರಕಟಿಸಿರುವ ಜಿಲ್ಲಾಧಿಕಾರಿಗಳು, ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಮುಂದಿನ ಇಪ್ಪತ್ತ ನಾಲ್ಕು ಗಂಟೆಗಳಿಗೆ ಬೇಕಾಗುವ ಆಕ್ಸಿಜನ್ ನಮ್ಮಲ್ಲಿ ಲಭ್ಯವಿದೆ. ಮತ್ತೊಂದೆಡೆ ಈಗಾಗಲೇ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಪೂರೈಕೆಯಲ್ಲೂ ವ್ಯತ್ಯಯವಾಗಲಿದೆ.
ನಮ್ಮ ಜಿಲ್ಲೆಯಲ್ಲಿ ಇತರ ಜಿಲ್ಲೆಗಳ ಸೋಂಕಿತರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆ ಆಕ್ಸಿಜನ ಆಗತ್ಯತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗಿ ಆಕ್ಸಿಜನ್ ಬಳಕೆ ಹೆಚ್ಚಾದಲ್ಲಿ ಕೊರತೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದವರು ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.