ಮಂಗಳೂರು, ಮೇ 03 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯ ಬಗ್ಗೆ ಸುದ್ದಿ ವೈರಲ್ ಆಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಆಕ್ಸಿಜನ್ ಕೊರತೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ಸೇರಿದಂತೆ ಶಾಸಕರ ಸಭೆ ನಡೆಸಿದ ಸಚಿವರು, ಮಾಹಿತಿ ಪಡೆದುಕೊಂಡಿದ್ದಾರೆ. ಬಳ್ಳಾರಿ ಹಾಗೂ ಪಾಲಕ್ಕಾಡ್ ನಿಂದ ಆಕ್ಸಿಜನ್ ಸರಬರಾಜಾಗುತ್ತಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಎಂತಹ ಕಠಿಣ ಪರಿಸ್ಥಿತಿಯನ್ನು ಬೇಕಾದರೂ ಎದುರಿಸಲು ಜಿಲ್ಲಾಡಳಿತ ಸನ್ನದ್ದವಾಗಿದ್ದು, ಜನರು ಆತಂಕಗೊಳ್ಳಲ್ದೆ, ಎಚ್ಚರಿಕೆಯಿಂದಿರುವಂತೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.