ಮಂಗಳೂರು, ಸೆ 24(SM): ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ತಂಡವೊಂದು ವಿಶ್ವ ಹಿಂದೂ ಪರಿಷತ್ ಮುಖಂಡನ ಮೇಲೆ ತಲ್ವಾರ್ ದಾಳಿ ನಡೆಸಿದ ಘಟನೆ ಗುರುಪುರ ಕೈಕಂಬದ ಸುರಲ್ಪಾಡಿಯಲ್ಲಿ ನಡೆದಿದೆ. ಕೈಕಂಬ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷ ಪೊಳಲಿ ಹರೀಶ್ ಶೆಟ್ಟಿ(38) ಎಂಬವರ ಮೇಲೆ ತಲ್ವಾರ್ ದಾಳಿ ನಡೆದಿದೆ.
![](https://daijiworld.ap-south-1.linodeobjects.com/iWeb/tvdaijiworld/img_tv247/allwyn_240918_attack3.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/allwyn_240918_attack2.jpg)
![](https://daijiworld.ap-south-1.linodeobjects.com/iWeb/tvdaijiworld/img_tv247/allwyn_240918_attack1.jpg)
೨ ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಹರೀಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಇಂದು ಸಂಜೆ ಕೆಲಸ ಮುಗಿಸಿ ಹರೀಶ್ ಕೈಕಂಬದಿಂದ ಎಡಪದವಿಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಹರೀಶ್ ಪ್ರಯಾಣಿಸುತ್ತಿದ್ದ ಬೈಕನ್ನು ಅಡ್ಡಗಟ್ಟಿದ್ದಾರೆ. ಹಾಗೂ ಏಕಾಏಕಿ ಹರೀಶ್ ಮೇಲೆ ತಲ್ವಾರ್ ದಾಳಿಗೆ ಮುಂದಾಗಿದ್ದಾರೆ. ಈ ವೇಳೆ ಹರೀಶ್ ಕೂಗಾಡಿದ್ದು, ಆರೋಪಿಗಳು ಆತನನ್ನು ಬಿಟ್ಟು ಪರಾರಿಯಾಗಿದ್ದಾರೆ.
ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ವಿಚಾರಣೆ ಮುಂದುವರೆದಿದೆ.