ಮಂಗಳೂರು, ಮೇ 14(DaijiworldNews/MS): ಕೊರೊನಾ ಮಹಾಮಾರಿಗೆ ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೇದೆ ಸಾವನ್ನಪ್ಪಿರುವ ಘಟನೆ ಮೇ .14 ರ ಶುಕ್ರವಾರ ನಡೆದಿದೆ. ಮೃತರನ್ನು ಶಿದ್ದಪ್ಪ ಶಿಂಗೆ (51) ಎಂದು ಗುರುತಿಸಲಾಗಿದೆ.
ಮೂಲತಃ ಬೆಳಗಾವಿಯ ಹುಕ್ಕೇರಿ ತಾಲೂಕಿನ ಹೊಸೂರಿನವರಾದ ಇವರು ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. 2016 ರಲ್ಲಿ ಸಶಸ್ತ್ರ ಮೀಸಲು ಪಡೆಗೆ ಸೇರ್ಪಡೆಗೊಂಡ ಇವರು ಮಂಗಳೂರು ನಗರದಲ್ಲಿ ಸಶಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 2 ಡೋಸ್ ಕೊರೊನಾ ಲಸಿಕೆಯ ಬಳಿಕವೂ ಇವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ ಎರಡು ವಾರಗಳಿಂದ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಹು ಅಂಗಾಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.