ನವದೆಹಲಿ, ಜ. 02 ( DaijiworldNews/SM): ಟೀಂ ಇಂಡಿಯಾದ ಟಿ-20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೊಸವರ್ಷಕ್ಕೆ ಹೊಸತೊಂದು ಸಂಕಲ್ಪ ಮಾಡಿದ್ದಾರೆ.
![](https://daijiworld.ap-south-1.linodeobjects.com/Linode/img_tv247/Santu-2.1.23-hardik.jpeg)
ದೇಶಕ್ಕಾಗಿ ಈ ಬಾರಿ ವಿಶ್ವಕಪ್ ಗೆಲ್ಲುವುದು ನನ್ನ ಹೊಸ ವರ್ಷದ ಸಂಕಲ್ಪವಾಗಿದೆ ಎಂದು ಟೀಮ್ ಇಂಡಿಯಾ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನದಿನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಂಡ್ಯ, ಕಳೆದ ವರ್ಷ ಟಿ20 ವಿಶ್ವಕಪ್ ನಮ್ಮಿಂದ ಕೈ ತಪ್ಪಿ ಹೋಯ್ತು. ಆದರೆ 2023 ರಲ್ಲಿ ನಡೆಯುವ ವಿಶ್ವಕಪ್ ಗೆಲ್ಲುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
ನಿಸ್ಸಂಶಯವಾಗಿ, ಒಂದು ವರ್ಷದ ಹಿಂದೆ ಎಲ್ಲವೂ ಭಿನ್ನವಾಗಿತ್ತು. ನಾವು ಟಿ20 ವಿಶ್ವಕಪ್ ಗೆಲ್ಲಲು ಬಯಸುತ್ತಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ. ಇದೀಗ ಹೊಸ ವರ್ಷದಲ್ಲಿ ಹೊಸ ಸಂಕಲ್ಪವನ್ನು ಹೊಂದಿದ್ದೇವೆ. ನನ್ನ ವೃತ್ತಿ ಜೀವನದಲ್ಲಿ ನಾನು ಏನನ್ನೂ ಸಾಧಿಸಿಲ್ಲ. ಆದ್ದರಿಂದ, ಭವಿಷ್ಯಕ್ಕಾಗಿ ಎದುರು ನೋಡುತ್ತಿದ್ದೇನೆ. ಅದರಂತೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಗುರಿ ಹೊಂದಿದ್ದೇನೆ. ಇದುವೇ ನನ್ನ ಹೊಸ ವರ್ಷದ ಸಂಕಲ್ಪ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.