ಮುಂಬೈ, ಮಾ 19 (DaijiworldNews/DB): ಜಾಗಿಂಗ್ ಮಾಡುತ್ತಿದ್ದ ಟೆಕ್ ಕಂಪೆನಿಯೊಂದರ ಸಿಇಒಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಂಬೈಯ ವರ್ಲಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
![](https://daijiworld.ap-south-1.linodeobjects.com/Linode/img_tv247/DB-08032023-raja.jpg)
ರಾಜಲಕ್ಷ್ಮಿ ರಾಮಕೃಷ್ಣನ್ ಮೃತಪಟ್ಟವರು. ಇನ್ನು ಕಾರಿನ ಚಾಲಕ ಸುಮೇರ್ ಮರ್ಚೆಂಟ್ ( 23) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಟೆಕ್ ಕಂಪೆನಿಯೊಂದರ ಸಿಇಒ ಆಗಿದ್ದ ರಾಜಲಕ್ಷ್ಮಿ ಫಿಟ್ನೆಸ್ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಭಾನುವಾರ ಬೆಳಗ್ಗೆ ವರ್ಲಿ ಡೇರಿ ಬಳಿ ಜಾಗಿಂಗ್ ಮಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ರಾಜಲಕ್ಷ್ಮಿ ಅವರಿಗೆ ಢಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಬಿದ್ದ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಚಾಲಕನನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.