ಶಿವಮೊಗ್ಗ, ಮಾ 20 (DaijiworldNews/SM): ನಗರದಲ್ಲಿ ಕೆಲವು ವ್ಯಕ್ತಿಗಳಿಂದ ಅಶಾಂತಿ ಸೃಷ್ಠಿಯಾಗುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರು ಮಂಗಳೂರಿನಲ್ಲಿ ಅಜಾನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಮಾರ್ಚ್ 17ರಂದು ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಜಾನ್ ಪಠಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಶ್ವಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
![](https://daijiworld.ap-south-1.linodeobjects.com/Linode/img_tv247/santu-6.3.23-ishwarappa.jpg)
ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವರು ಅವರ ಕೃತ್ಯವನ್ನು ದೇಶದ್ರೋಹ ಎಂದು ಕರೆದಿದ್ದರು. ವಿಧಾನಸೌಧದಲ್ಲಿಯೂ ಮಾಡುವುದಾಗಿ ಆ ವ್ಯಕ್ತಿ ಹೇಳಿಕೊಂಡಿದ್ದಾನೆ. ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಮತ್ತು ಕೇಂದ್ರ ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಸಂದರ್ಭದಲ್ಲೂ ಅಲ್ಲಾನನ್ನು ಅವಮಾನಿಸಿಲ್ಲ. ಅವರು ಯಾವಾಗ ಬೇಕಾದರೂ ಅಜಾನ್ ಪಠಿಸಿದರೆ ಅಲ್ಲಾಹನು ಸಂತೋಷಪಡುತ್ತಾನೆಯೇ ಎಂದು ನಾನು ತಿಳಿಯಲು ಬಯಸುತ್ತೇನೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.
ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಅವರು ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇವಲ ಎಚ್ಚರಿಕೆ ನೀಡಿ ಅವರನ್ನು ಮನೆಗೆ ಕಳುಹಿಸುವುದು ಹೇಗೆ? ನಮಗೆ ಪೊಲೀಸರು ಏಕೆ ಬೇಕು?" ಎಂದು ಪ್ರಶ್ನಿಸಿದ ಅವರು, ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಒತ್ತಾಯಿಸುವುದಾಗಿ ಹೇಳಿದರು.