ಖಲಿಸ್ತಾನ್, ಅ 11 (DaijiworldNews/HR): ಪಂಜಾಬ್ಗಾಗಿ ಹಮಾಸ್ ಮಾದರಿಯಲ್ಲೇ ದಾಳಿ ನಡೆಸುತ್ತೇವೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತಕ್ಕೆ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ.
![](https://daijiworld.ap-south-1.linodeobjects.com/Linode/img_tv247/hr-111023-pnnu.jpg)
ಗುರುಪತ್ವಂತ್ ಸಿಂಗ್ ಪನ್ನು ಪ್ರಧಾನಿ ನರೇಂದ್ರ ಮೋದಿಗೆ ಎಚ್ಚರಿಕೆ ನೀಡಿದ್ದು, ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಿಂದಾರೂ ಬುದ್ಧಿ ಕಲಿತುಕೊಳ್ಳಿ, ಹಮಾಸ್ ಮಾದರಿಯಲ್ಲೇ ನಾವು ದಾಳಿ ನಡೆಸುತ್ತೇವೆ ಎಂದಿದ್ದಾನೆ.
ಇನ್ನು ಖಲಿಸ್ತಾನಿ ಉಗ್ರ ಪನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಬೆದರಿಕೆ ಹಾಕಿದ್ದಾನೆ. ನಾವು ಪಂಜಾಬ್ನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ ಅದನ್ನು ಭಾರತದಿಂದ ಮುಕ್ತಗೊಳಿಸಲು ಯಾವ ಹಂತಕ್ಕೆ ಬೇಕಾದರೂ ಇಳಿಯುತ್ತೇವೆ ಎಂದು ಹೇಳಿದ್ದಾನೆ.