ಬೆಳ್ತಂಗಡಿ, ಅ.27 (DaijiworldNews/AA): ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ 3 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ದಾರುಣ ಘಟನೆ ಬೆಳ್ತಂಗಡಿಯ ಉಜಿರೆ ಬದನಾಜೆ ಸರಕಾರಿ ಹಿ.ಪ್ರಾ.ಶಾಲೆಯ ಎದುರು ನಡೆದಿದೆ.
![](https://daijiworld.ap-south-1.linodeobjects.com/Linode/images3/acdnt_281023_1.jpg)
ದಿ.ಅಶೋಕ ಮತ್ತು ಜಯಶ್ರೀ ದಂಪತಿಯ ಪುತ್ರಿ ಅಂಕಿತಾ ಸಾವನ್ನಪ್ಪಿದ ವಿದ್ಯಾರ್ಥಿನಿ.
ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರ ವಿಕಾಸ್ ವಿರುದ್ಧ ದೂರು ದಾಖಲಾಗಿದೆ.