ಮಂಗಳೂರು, ಅ.28 (DaijiworldNews/SK): ಕುಂದಾಪುರದಿಂದ ಮೈಸೂರ್- ಮಂಡ್ಯ ತೆರಳುವ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ.
![](https://daijiworld.ap-south-1.linodeobjects.com/Linode/img_tv247/hr-281023-us.jpg)
ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಯನ್ನು ತಿಳಿಗೊಳಿಸಿದ್ದಾರೆ.