ಮಂಗಳೂರು, ಅ 29 (DaijiworldNews/RA): ಕೇರಳದ ಎರ್ನಾಕುಲಂನ ಕಳಮಶೇರಿಯಲ್ಲಿ ನಡೆದ ಸ್ಪೋಟದ ಹಿನ್ನಲೆಯಲ್ಲಿ ರಾಜ್ಯದಲ್ಲಿಎಚ್ಚರಿಕೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
![](https://daijiworld.ap-south-1.linodeobjects.com/Linode/img_tv247/ms-291023-param.jpg)
ಎರ್ನಾಕುಲಂನ ಕಳಮಶೇರಿಯಲ್ಲಿರುವ ಕನ್ವೆನ್ಷನ್ ಸೆಂಟರ್ನಲ್ಲಿ ಕ್ರೈಸ್ತ ಪಂಗಡದವರ ಯಾಹೋವಾ ಸಾಕ್ಷಿ ಸಮಾವೇಶದಲ್ಲಿ ನಡೆದ ಭೀಕರ ಸ್ಫೋಟದ ಕುರಿತು ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪೊಲೀಸ್ ಇಲಾಖೆ ಈ ಬಗ್ಗೆ ಮಾನಿಟರ್ ಮಾಡುತ್ತಿದೆ.
ಕೇರಳದಲ್ಲಿ ನಡೆದ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಮಾಹಿತಿ ಇಲ್ಲ, ಆದರೆ ಮಂಗಳೂರು ಸೇರಿದಂತೆ ರಾಜ್ಯದ ಗಡಿ ಭಾಗದಲ್ಲೂ ತಪಾಸಣೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.