ಕಾರ್ಕಳ, ನ 13 (DaijiworldNews/HR): ಅಂಗಡಿಯೊಂದರಲ್ಲಿ ನಿಯಮ ಉಲ್ಲಂಘಿಸಿ ದಾಸ್ತಾನು ಇರಿಸಿದ್ದ ಸಾವಿರಾರು ರೂ. ಮೌಲ್ಯದ ಸ್ಫೋಟಕ ವಸ್ತುಗಳನ್ನು ಕಾರ್ಕಳ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ಸಚ್ಚರಿಪೇಟೆ ನಡೆದಿದೆ.
![](https://daijiworld.ap-south-1.linodeobjects.com/Linode/img_tv247/hr-131123-karkala.jpg)
ಪರವಾನಿಗೆ ಪಡೆದುಕೊಂಡು ಕೆಮಿಕಲ್ ಕಡಿಮೆ ಇರುವ ಹಸಿರು ಪಟಾಕಿಗಳನ್ನು ದಾಸ್ತಾನು ಮಾಡಬೇಕು ಮತ್ತು ಅದಕ್ಕೆ ಪ್ರತ್ಯೇಕವಾದ ಗೋಡಾನ್ ಮಾಡಿ 7 ಅಡಿ ಎತ್ತರದ ಕಂಪೌಂಡನ್ನು ಗೋಡಾನಿನ ಸುತ್ತಲೂ ನಿರ್ಮಿಸಬೇಕು. ಅಲ್ಲದೆ ಗೋಡಾನಿನ ಸುತ್ತಲೂ 100 ಮೀಟರ್ ದೂರದಲ್ಲಿ ಯಾವುದೇ ವಾಸದ ಮನೆಗಳು ಇರದಂತೆ ನಿಯಮಗಳಿವೆ.
ಆದರೆ ಈ ನಿಯಮ ಉಲ್ಲಂಘಿಸಿ ಜನರಲ್ ಸ್ಟೋರ್ಸ್ನಲ್ಲಿ ಸ್ಫೋಟಕ ವಸ್ತುಗಳನ್ನು ದಾಸ್ತಾನು ಇರಿಸಿದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದ ಪೊಲೀಸರು ದಾಳಿ ನಡೆಸಿ ಸುಮಾರು 41370ರೂ. ಮೌಲ್ಯದ 38 ಕೆ.ಜಿ. ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.