ಬೆಂಗಳೂರು, ಫೆ 06 (DaijiworldNews/AK):ವಿಮಾನದಲ್ಲಿ ವಿಷದ್ರಾವಣ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಕೊನೆಗೂ ಚೇತರಿಸಿಕೊಂಡಿದ್ದಾರೆ. ಇದೀಗ ಕರ್ನಾಟಕ ರಣಜಿ ತಂಡಕ್ಕೂ ವಾಪಸ್ ಆಗಿದ್ದಾರೆ.
![](https://daijiworld.ap-south-1.linodeobjects.com/Linode/img_tv247/06-02-2024AKAGARWAL.jpg)
ರಣಜಿ ಟ್ರೋಫಿ 2024ರ ತಮಿಳುನಾಡು ವಿರುದ್ಧದ ಪಂದ್ಯಕ್ಕಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಮಯಾಂಕ್ ಅಗರ್ವಾಲ್ ಕಾಣಿಸಿಕೊಂಡಿದ್ದಾರೆ. ಅಂದರೆ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಮಯಾಂಕ್ ಇದೀಗ ಮತ್ತೆ ರಾಜ್ಯ ತಂಡಕ್ಕೆ ಮರಳಿದ್ದಾರೆ.
ಈ ಹಿಂದೆ ತ್ರಿಪುರಾ ವಿರುದ್ಧದ ಪಂದ್ಯದ ಬಳಿಕ ಸೂರತ್ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ಇರಿಸಲಾಗಿದ್ದ ವಿಷಕಾರಿ ದ್ರವವನ್ನು ಕುಡಿದಿದ್ದರಿಂದ ಅವರು ಅಸ್ವಸ್ಥಗೊಂಡಿದ್ದರು. ಅಲ್ಲದೆ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಇದಾದ ಬಳಿಕ ಮಯಾಂಕ್ ತ್ರಿಪುರಾದಿಂದ ನೇರವಾಗಿ ಬೆಂಗಳೂರಿಗೆ ಮರಳಿದ್ದರು. ಅಲ್ಲದೆ ರೈಲ್ವೇಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಮಯಾಂಕ್ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.