ಮಂಗಳೂರು, ಫೆ 12 (DaijiworldNews/MS): ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ಸಮೀಪದ ಅರ್ಕುಳ ದ್ವಾರದ ಬಳಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
![](https://daijiworld.ap-south-1.linodeobjects.com/Linode/img_tv247/ms-120224-acdent.jpg)
ಸ್ಥಳೀಯ ನಿವಾಸಿ ಚರಣ್ ರಾಜ್ (34) ಮೃತಪಟ್ಟವರು. ಇವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಬಸ್ ಢಿಕ್ಕಿಯಾಗಿದೆ.
ಅವೈಜ್ಞಾನಿಕ ಕಾಮಗಾರಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಇದಕ್ಕೆ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.