ಬಂಟ್ವಾಳ, ಏ 01(DaijiworldNews/MS): ಬಾಲಕನೋರ್ವ ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದ ದಾರುಣ ಘಟನೆ ಎ.1 ರ ಸೋಮವಾರ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕನಾಗಿದ್ದಾನೆ.
![](https://daijiworld.ap-south-1.linodeobjects.com/Linode/img_tv247/ms-010424-ADISH.jpg)
ಆಸ್ಪತ್ರೆಯ ಮುಂಭಾಗ ಜನಸ್ತೋಮ
ಬಾಲಕ ಆದಿಶ್ ತಮ್ಮ ಮನೆಯ್ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಬಂಟ್ವಾಳ ನಗರ ಪೊಲೀಸ್ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.