ಮಂಗಳೂರು,ಸೆ.09: ಮಂಗಳೂರು ಚಲೋ ಹಿನ್ನೆಲೆ ಇನ್ಸ್ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂದಿಸಿದಂತೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಮಂಗಳೂರು ಚಲೋ ಜಾಥಾದ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕದ್ರಿ ಗೋರಕ್ಷನಾಥ ಸಭಾಂಗಣದಲ್ಲಿ ಕೂಡಿಹಾಕಿದ್ದರು. ಕೇಸ್ ಬುಕ್ ಮಾಡುವ ನೆಪದಲ್ಲಿ ಕೂಡಿಹಾಕಿ ಕಾರ್ಯಕರ್ತರನ್ನು ಬಿಡುಗಡೆ ಮಾಡಲು ತಡಮಾಡಿದ್ದಕ್ಕೆ ಆಕ್ರೋಶಗೊಂಡ ಸಂಸದರು ಸ್ಥಳಕ್ಕೆ ತೆರಳಿ ಕದ್ರಿ ಇನ್ಸ್ಪೆಕ್ಟರ್ ಮಾರುತಿ ನಾಯಕ್ಗೆ ಅವಾಜ್ ಹಾಕಿದ್ದರು.
![](https://daijiworld.ap-south-1.linodeobjects.com/iWeb/tvdaijiworld/img_tv247/09092017_nalin-case.jpg)
ಈ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಮಾರುತಿ ನಾಯಕ್ ನೀಡಿದ ದೂರಿನ ಅನ್ವಯ ಸಂಸದ ನಳಿನ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.